Bharatha SarathiBharatha Sarathi
  • HOME
  • About Us
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಕ್ರೀಡೆ
  • ಕ್ರೈಂ ಸುದ್ದಿ
  • ರಾಜಕೀಯ
  • ರಾಜ್ಯ ಸುದ್ದಿ
  • More
    • ತಂತ್ರಜ್ಞಾನ
    • ರಾಶಿ ಭವಿಷ್ಯ
    • ರಾಷ್ಟ್ರೀಯ ಸುದ್ದಿ
    • ಲೋಕಲ್ ಸುದ್ದಿ
    • ವಾಣಿಜ್ಯ
    • ವಿಶೇಷವರದಿ
    • ಸಿನಿಮಾ
  • ಇ-ಪೇಪರ್

Subscribe to Updates

Get the latest creative news from FooBar about art, design and business.

Facebook Twitter Instagram
Trending
  • E paper 29 jan 2023
  • E paper 27 jan 2023
  • 26 jan 2023
  • E paper 25 jan 2023
  • E paper 24 jan 2023
  • E paper 22 jan 2023
  • E paper 21 jan 2023
  • E paper 20 jan 2023
Facebook Twitter Instagram
Bharatha SarathiBharatha Sarathi
AD 1
  • HOME
  • About Us
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಕ್ರೀಡೆ
  • ಕ್ರೈಂ ಸುದ್ದಿ
  • ರಾಜಕೀಯ
  • ರಾಜ್ಯ ಸುದ್ದಿ
  • More
    • ತಂತ್ರಜ್ಞಾನ
    • ರಾಶಿ ಭವಿಷ್ಯ
    • ರಾಷ್ಟ್ರೀಯ ಸುದ್ದಿ
    • ಲೋಕಲ್ ಸುದ್ದಿ
    • ವಾಣಿಜ್ಯ
    • ವಿಶೇಷವರದಿ
    • ಸಿನಿಮಾ
  • ಇ-ಪೇಪರ್
Bharatha SarathiBharatha Sarathi
Home»ಲೋಕಲ್ ಸುದ್ದಿ»ಮಗು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ದಂಪತಿಗೆ ಪೊಲೀಸರ ಕಿರುಕುಳ ಕಿರುಕುಳ ಗೃಹ ಸಚಿವರ ಉತ್ತರಕ್ಕೆ HDK ಆಗ್ರಹ
ಲೋಕಲ್ ಸುದ್ದಿ

ಮಗು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ದಂಪತಿಗೆ ಪೊಲೀಸರ ಕಿರುಕುಳ ಕಿರುಕುಳ ಗೃಹ ಸಚಿವರ ಉತ್ತರಕ್ಕೆ HDK ಆಗ್ರಹ

November 3, 2022
Facebook Twitter Pinterest LinkedIn WhatsApp Reddit Email Telegram
Share
Facebook Twitter LinkedIn Pinterest Email Telegram WhatsApp

ಬೆಂಗಳೂರು: ಮಂಡ್ಯ ಜಿಲ್ಲೆಯಲ್ಲಿ ಅನಾರೋಗ್ಯಕ್ಕೆ ತುತ್ತಾಗಿದ್ದ ಮಗುವನ್ನು ಆಸ್ಪತ್ರೆಗೆ ಬೈಕಿನಲ್ಲಿ ಕರೆದೊಯ್ಯುತ್ತಿದ್ದ ದಂಪತಿಯನ್ನು ಅಡ್ಡಗಟ್ಟಿ ನಿಯಮಗಳ ನೆಪದಲ್ಲಿ ಕಿರುಕುಳ ನೀಡಿದ ಪೊಲೀಸರ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಮಂಡ್ಯದಲ್ಲಿ ಮಗುವಿನೊಂದಿಗೆ ಆಸ್ಪತ್ರೆಗೆ ತೆರಳುತ್ತಿದ್ದ ದಂಪತಿಯನ್ನು ಅಡ್ಡಗಟ್ಟಿ ಪೊಲೀಸರು ಕಿರುಕುಳ ನೀಡಿದ್ದು ಖಂಡನೀಯ. ಮಾನವೀಯತೆಯನ್ನೇ ಅಣಕಿಸುವ ಇಂಥ ಘಟನೆಗಳು ರಾಜ್ಯದಲ್ಲಿ ಪದೇಪದೆ ಘಟಿಸುತ್ತಿರುವುದು ಆಘಾತಕಾರಿ ವಿಷಯ ಎಂದು ಅವರು ಹೇಳಿದ್ದಾರೆ.


ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆಯನ್ನು ರಾಜ್ಯ ಬಿಜೆಪಿ ಸರಕಾರ ಹಾಳು ಮಾಡಿದೆ ಎನ್ನುವುದಕ್ಕೆ ಈ ಘಟನೆ ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಸ್ಪತ್ರೆಗೆ ಬೈಕ್‌ನಲ್ಲಿ ಮಗುವನ್ನು ಕರೆದುಕೊಂಡು ಹೋಗುತ್ತಿದ್ದ ತಂದೆ-ತಾಯಿಯನ್ನು ಅಡ್ಡಗಟ್ಟಿ ಹೆಲ್ಮೆಟ್ ಇಲ್ಲ ಎನ್ನುವ ಕಾರಣಕ್ಕೆ ಬೈಕಿನ ಕೀ ಕಿತ್ತುಕೊಂಡು ಪೊಲೀಸರು ಕಿರುಕುಳ ನೀಡಿದ ಘಟನೆಯ ವಿಡಿಯೋ ತುಣುಕುಗಳನ್ನು ನೋಡಿ ನನಗೆ ಬಹಳ ಸಂಕಟವಾಯಿತು. ಮಗುವಿನ ಅನಾರೋಗ್ಯದಿಂದ ಆತಂಕಗೊಂಡಿದ್ದ ದಂಪತಿಯೊಂದಿಗೆ ಪೊಲೀಸರು ಹೀಗೆ ನಡೆದುಕೊಂಡಿದ್ದು ಅಕ್ಷಮ್ಯ ಮತ್ತು ಹೇಯ. “ದಮ್ಮಯ್ಯ, ನಮ್ಮಲ್ಲಿ ಹಣವಿಲ್ಲ, ದಯವಿಟ್ಟು ಬಿಟ್ಟುಬಿಡಿ” ಎಂದು ಬೇಡಿಕೊಂಡರೂ ಪೊಲೀಸರು ದಯೆ ತೋರಿಸಿಲ್ಲ. ದಂಡದ ಮಾತು ಹೇಳುತ್ತಲೇ ಪೊಲೀಸರು ಹಣಕ್ಕಾಗಿ ಪೀಡಿಸಿರುವುದು ಪೈಶಾಚಿಕ ನಡವಳಿಕೆ, ಇಲಾಖೆಯೇ ತಲೆ ತಗ್ಗಿಸುವಂತದ್ದು ಎಂದು ಅವರು ಕಿಡಿಕಾರಿದ್ದಾರೆ.

ಹಣವಿಲ್ಲದೇ ದಂಪತಿ ರಸ್ತೆಯಲ್ಲೇ ಪರದಾಡಿದ್ದಾರೆ. ಆ ಮಗುವಿನ ತಂದೆ ಹಣಕ್ಕಾಗಿ ಒದ್ದಾಡಿದ್ದಾರೆ, ಆ ತಾಯಿ ಅನಾರೋಗ್ಯಕ್ಕೆ ತುತ್ತಾಗಿದ್ದ ಮಗುವನ್ನು ರಸ್ತೆ ನಡುವೆಯೇ ಮಡಿಲಲ್ಲಿಟ್ಟುಕೊಂಡು ಅನುಭವಿಸಿದ ವೇದನೆ ರಾಜ್ಯ ಬಿಜೆಪಿ ಸರಕಾರದ ಕೆಟ್ಟ ಆಡಳಿತಕ್ಕೆ ಹಿಡಿದ ಕನ್ನಡಿ, ಮನುಷ್ಯತ್ವ ಸತ್ತ ಸರಕಾರದ ಇನ್ನೊಂದು ಕರಾಳಮುಖ ಎನ್ನದೇ ವಿಧಿ ಇಲ್ಲ ಎಂದು ಕುಮಾರಸ್ವಾಮಿ ಅವರು ಟೀಕಿಸಿದ್ದಾರೆ.

ಆ ಮಗುವಿನ ತಂದೆ ಕೊನೆಗೂ ಗೆಳೆಯರೊಬ್ಬರಿಂದ ಹಣ ಪಡೆದು ತಮ್ಮ ಬ್ಯಾಂಕ್ ಖಾತೆಗೆ ಹಾಕಿಸಿಕೊಂಡು ದಂಡ ಕಟ್ಟಿದ ಮೇಲೆ ಪೊಲೀಸರು ಬೈಕ್ ಬಿಟ್ಟು ಕಳಿಸಿದ್ದಾರೆ.
ಬದಲಿಗೆ ದಂಡದ ರಸೀತಿ ಕೊಟ್ಟು, ಆ ನಂತರ ದಂಡ ಕಟ್ಟಿ ಎಂದು ಪೊಲೀಸರು ಹೇಳಬಹುದಿತ್ತು. ಹಾಗೆ ಮಾಡದೇ ದಂಡಪ್ರಯೋಗದ ಹೆಸರಿನಲ್ಲಿ ಪೊಲೀಸರು ಹಿಂಸೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ಕೂಡಲೇ ಆ ಪೊಲೀಸ್ ಸಿಬ್ಬಂದಿಯ ವಿರುದ್ಧ ರಾಜ್ಯ ಸರಕಾರ ಕಠಿಣ ಕ್ರಮ ವಹಿಸಬೇಕು ಹಾಗೂ ಇಂಥ ಮನಃಸ್ಥಿತಿಯ ಪೊಲೀಸ್ ಸಿಬ್ಬಂದಿಯ ಮನಃಪರಿವರ್ತನೆ ಮಾಡಬೇಕು. ಹಿರಿಯ ಅಧಿಕಾರಿಗಳು ಈ ಬಗ್ಗೆ ಹೆಚ್ಚು ಮುತುವರ್ಜಿ, ಎಚ್ಚರಿಕೆ ವಹಿಸಬೇಕು. ಅಲ್ಲದೆ; ಗೃಹ ಸಚಿವರು ಈ ಬಗ್ಗೆ ಜನರಿಗೆ ಉತ್ತರ ನೀಡಬೇಕಲ್ಲದೆ, ನೊಂದ ದಂಪತಿಗೆ ಸಾಂತ್ವನ ಹೇಳಲೇಬೇಕು. ಇಂಥ ಘಟನೆಗಳು ರಾಜ್ಯದಲ್ಲಿ ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಹಾಗೂ ಪೊಲೀಸ್ ವ್ಯವಸ್ಥೆಯನ್ನು ಜನಸ್ನೇಹಿಯನ್ನಾಗಿ ಮಾಡಲು ಎಲ್ಲಾ ಕ್ರಮಗಳನ್ನು ತುರ್ತಾಗಿ ಕೈಗೊಳ್ಳಬೇಕು ಎಂದು ಹೆಚ್ ಡಿಕೆ ಆಗ್ರಹಿಸಿದ್ದಾರೆ.

ಜಾಹೀರಾತು ಮತ್ತು ಸುದ್ದಿ ಕಳುಹಿಸಲು ಸಂಪರ್ಕಿಸಿ
9740160669
ಭಾರತ ಸಾರಥಿ ಕನ್ನಡ ದಿನಪತ್ರಿಕೆ ಸದಾ ನಿಮ್ಮೊಂದಿಗೆ

Share. Facebook Twitter Pinterest LinkedIn Telegram Email
Previous ArticleE paper 03 nov 2022
Next Article E paper 04 nov 2022

Related Posts

ಕನ್ನಡೇತರರಿಗೆ ಕನ್ನಡ ಕಲಿಸಲು ವಾರಕ್ಕೆ ಒಂದು ಗಂಟೆ ಮೀಸಲಿಡಿ: ಹಿರಿಯ ನಟ ರಮೇಶ್ ಭಟ್

November 27, 2022

ಕಳ್ಳರ ಸಾಮ್ರಾಜ್ಯದಲ್ಲಿ ಭ್ರಷ್ಟಾಚಾರದ ಆರೋಪ ನ್ಯಾ. ಸಂತೋಷ್ ಹೆಗ್ಡೆ

October 22, 2022

ಮಾಜಿ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

August 3, 2022
Ad 2
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

Recent Posts

ಇಂಜಿನಿಯರಿಂಗ್ ಪದವಿ ಪಡೆದಿರುವ ಶ್ರುತಿ ನಟನೆಯಲ್ಲಿ ಬ್ಯುಸಿ

August 16, 2022

ನಾನು ಮಾಡೆಲ್ ಆಗಿದ್ದೇನೆ ಎಂದರೆ ಅದಕ್ಕೆ ಪ್ರೇರಣೆ ಕಿಚ್ಚ ಸುದೀಪ್ – ವಿನಯಾ ಗಣೇಶ್

November 18, 2022

ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಪುಟ್ಟಕ್ಕನ ಮಗಳು

August 15, 2022

ಯಶಸ್ವಿ 200 ಸಂಚಿಕೆ ಪೂರೈಸಿದ ಮುದ್ದುಮಣಿಗಳು… ಶಿವು ಪಾತ್ರಧಾರಿ ಹೇಳಿದ್ದೇನು ಗೊತ್ತಾ?

September 19, 2022
About Us
About Us
Facebook Twitter YouTube
February 2023
M T W T F S S
 12345
6789101112
13141516171819
20212223242526
2728  
« Jan    
Latest Posts

E paper 29 jan 2023

E paper 27 jan 2023

26 jan 2023

© 2023 Bharatha Sarathi. Powered by FILMY SCOOP.

Type above and press Enter to search. Press Esc to cancel.