Bharatha SarathiBharatha Sarathi
  • HOME
  • About Us
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಕ್ರೀಡೆ
  • ಕ್ರೈಂ ಸುದ್ದಿ
  • ರಾಜಕೀಯ
  • ರಾಜ್ಯ ಸುದ್ದಿ
  • More
    • ತಂತ್ರಜ್ಞಾನ
    • ರಾಶಿ ಭವಿಷ್ಯ
    • ರಾಷ್ಟ್ರೀಯ ಸುದ್ದಿ
    • ಲೋಕಲ್ ಸುದ್ದಿ
    • ವಾಣಿಜ್ಯ
    • ವಿಶೇಷವರದಿ
    • ಸಿನಿಮಾ
  • ಇ-ಪೇಪರ್

Subscribe to Updates

Get the latest creative news from FooBar about art, design and business.

Facebook Twitter Instagram
Trending
  • E paper 01 Feb 2023
  • E paper 29 jan 2023
  • E paper 27 jan 2023
  • 26 jan 2023
  • E paper 25 jan 2023
  • E paper 24 jan 2023
  • E paper 22 jan 2023
  • E paper 21 jan 2023
Facebook Twitter Instagram
Bharatha SarathiBharatha Sarathi
AD 1
  • HOME
  • About Us
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಕ್ರೀಡೆ
  • ಕ್ರೈಂ ಸುದ್ದಿ
  • ರಾಜಕೀಯ
  • ರಾಜ್ಯ ಸುದ್ದಿ
  • More
    • ತಂತ್ರಜ್ಞಾನ
    • ರಾಶಿ ಭವಿಷ್ಯ
    • ರಾಷ್ಟ್ರೀಯ ಸುದ್ದಿ
    • ಲೋಕಲ್ ಸುದ್ದಿ
    • ವಾಣಿಜ್ಯ
    • ವಿಶೇಷವರದಿ
    • ಸಿನಿಮಾ
  • ಇ-ಪೇಪರ್
Bharatha SarathiBharatha Sarathi
Home»ವಿಶೇಷವರದಿ»ಇನ್ಸ್ಪೆಕ್ಟರ್ ನಂದೀಶ್ ಸಾವಿನ ತನಿಖೆಗೆ ಎಚ್. ಡಿ. ಕೆ ಒತ್ತಾಯ
ವಿಶೇಷವರದಿ

ಇನ್ಸ್ಪೆಕ್ಟರ್ ನಂದೀಶ್ ಸಾವಿನ ತನಿಖೆಗೆ ಎಚ್. ಡಿ. ಕೆ ಒತ್ತಾಯ

October 30, 2022
Facebook Twitter Pinterest LinkedIn WhatsApp Reddit Email Telegram
Share
Facebook Twitter LinkedIn Pinterest Email Telegram WhatsApp

ಬೆಂಗಳೂರು: ಕೋಲಾರದಿಂದ ನಾನು ಸ್ಪರ್ಧೆ ಮಾಡುವುದಿಲ್ಲ. ಚನ್ನಪಟ್ಟಣದಲ್ಲಿಯೇ ಸ್ಪರ್ಧೆ ಮಾಡುತ್ತೇನೆ ಎಂದು ಈಗಾಗಲೇ ಹೇಳಿದ್ದೇನೆ ಎಂದು ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಪಕ್ಷ ಸಂಘಟನೆ ದೃಷ್ಟಿಯಿಂದ ಇಂದು ಕರೆದಿರುವ ವೀರಶೈವ ಲಿಂಗಾಯತ ಮುಖಂಡರ ಸಭೆಗೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದರು ಅವರು.

ಕಾರ್ಯಕರ್ತರು ನನ್ನ ಮೇಲಿನ ಅಭಿಮಾನದಿಂದ‌ ಕೋಲಾರದಿಂದ ಸ್ಪರ್ಧೆ ಮಾಡಿ ಅಂತ ಹೇಳಿದ್ದಾರೆ. ಅಲ್ಲಿನ ಜನರ ಸಮಸ್ಯೆ ಏನಿದೆ ಅಂತ ನನಗೆ ಗೊತ್ತಿದೆ. ಕೋಲಾರದಲ್ಲಿ ನಮ್ಮ‌ ಪಕ್ಷಕ್ಕೆ ಸಮರ್ಥ ಅಭ್ಯರ್ಥಿಗಳು ಇದ್ದಾರೆ. ಕೆಜಿಎಫ್ ಬಿಟ್ಟು ಉಳಿದ ಕಡೆ ನಮ್ಮ ಶಾಸಕರು ಇದ್ದಾರೆ. ನಾನೇ ಹೋಗಿ ಸ್ಪರ್ಧೆ ಮಾಡಬೇಕು ಅಂತ ಇಲ್ಲ. ಎಲ್ಲಾ ಮುಖಂಡರ ಜತೆ ಚರ್ಚೆ ಮಾಡಿ ಸಮಸ್ಯೆ ಪರಿಹಾರ ಮಾಡುತ್ತೇನೆ ಎಂದು ಹೇಳಿದರು.

ಮಾನ ಮರ್ಯಾದೆ ಇದ್ದಾರೆ ತನಿಖೆ ಮಾಡಿಸಿ
ಕೆ.ಆರ್.ಪುರ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ನಂದೀಶ್ ಸಾವು ವಿಚಾರಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು,
ಸಚಿವ ಎಂಟಿಬಿ ನಾಗರಾಜ್ ವಿಡಿಯೋ ಜಗಜ್ಜಾಹೀರು ಆಗಿದೆ. ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದಾರೆ ತನಿಖೆ ಮಾಡಿಸಲಿ. ಈಗಾಗಲೇ ಮುಖ್ಯಮಂತ್ರಿಗಳು ತನಿಖೆ ಮಾಡಿಸುವುದಾಗಿ ಹೇಳಿದ್ದಾರೆ. ಆದರೆ, ಏನು, ಯಾವ ರೀತಿ ತನಿಖೆ ಮಾಡುತ್ತಿದ್ದಾರೆ ಎಂಬುದು ಗೊತ್ತಿಲ್ಲ ಎಂದು ಕಿಡಿಕಾರಿದರು.

ನಂದೀಶ್ ಅವರ ಸಾವು ಪೊಲೀಸ್ ಇಲಾಖೆಯಲ್ಲಿ ನಡೆಯುವ ಕರಾಳ ಘಟನೆಗಳಿಗೆ ಕನ್ನಡಿ ಹಿಡಿದಂತೆ ಇದೆ. ಈ ಕಾರಣಕ್ಕೆ ತನಿಖೆಯನ್ನು ಸರಿಯಾದ ದಿಕ್ಕಿನಲ್ಲಿ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಅವರು ಒತ್ತಾಯ ಮಾಡಿದರು.

ಕೋಟಾ ಶ್ರೀನಿವಾಸ ಪೂಜಾರಿ ಬಿಟ್ಟರೆ ಬೇರೆ ಯಾವ ಸಚಿವರೂ ಸರಿ ಇಲ್ಲ
ಬಿಜೆಪಿ ಸರ್ಕಾರದಲ್ಲಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಒಬ್ಬರನ್ನು ಬಿಟ್ಟರೆ ಬೇರೆ ಯಾವ ಸಚಿವರೂ ಸರಿ ಇಲ್ಲ. ಎಲ್ಲರೂ ದುಡ್ಡಿನ ದಂಧೆ ಮಾಡಲು‌ ಬಾಗಿಲು ತೆಗೆದುಕೊಂಡು ಕೂತಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ದೊಡ್ಡ ದಂಧೆಯೇ ನಡೆಯುತ್ತಿದೆ. ಸಚಿವ ಎಂಟಿಬಿ ನಾಗರಾಜ್ ಯಾಕೆ ಹಾಗೆ ಹೇಳಿದರು? ಅದರ ಹಿಂದೆ ಏನೆಲ್ಲಾ ನಡೆದಿದೆ ಎನ್ನುವುದು ನನಗೆ ಎಲ್ಲವೂ ಗೊತ್ತಿದೆ. ನಂದೀಶ್ 80 ಲಕ್ಷ ರೂಪಾಯಿ ಕೊಟ್ಟು ಮೂರು ತಿಂಗಳು ಆಗಿರಲಿಲ್ಲ. ಅಷ್ಟರಲ್ಲಿ ಅವರನ್ನು ಅಮಾನತು ಮಾಡಿದರು. ಅದರ ನೋವಿನಲ್ಲಿ ನಂದೀಶ್ ಗೆ ಹೃದಯಾಘಾತ ಆಗಿರಬಹುದು. ಅಲ್ಲಿನ ಶಾಸಕರಿಗೆ ಎಷ್ಟು ಹೋಗಿದೆ, ಯಾರ್ಯಾರಿಗೆ ಎಷ್ಟು ಹೋಗಿದೆ. ಎಲ್ಲವೂ ತನಿಖೆ ಮಾಡಿದ್ರೆ ಹೊರಬರಲಿದೆ ಎಂದು ಕುಮಾರಸ್ವಾಮಿ ಅವರು ತನಿಖೆಗೆ ಒತ್ತಾಯಿಸಿದರು.

ಜೆಸಿಬಿಯಿಂದ ಹಣ ಬಾಚುತ್ತಿರುವ ಸರ್ಕಾರ
ಕೆಲ ಸಚಿವರು ಎಷ್ಟೇ ಶ್ರೀಮಂತರಿದ್ದರೂ ಅವರಿಗೆ ಹಣದ ದಾಹ ಕಡಿಮೆಯಾಗಿಲ್ಲ. ಎಷ್ಟು ಸಾಧ್ಯವೋ ಅಷ್ಟನ್ನೂ ಗೋರುತ್ತಿದ್ದಾರೆ. ಈ ಸರಕಾರದಲ್ಲಿ ಕೈನಲ್ಲಿ‌ ಹಣ ಬಾಚುತ್ತಿಲ್ಲ, ಜೆಸಿಬಿಯಲ್ಲಿ, ಹಿತಾಚಿಯಲ್ಲಿ ಬಾಚುತ್ತಿದ್ದಾರೆ. ಆದೇನು ತನಿಖೆ ಮಾಡುತ್ತಾರೋ ನೋಡೋಣ. ಈ ಸರ್ಕಾರಕ್ಕೆ ನಾಚಿಕೆ ಆಗಬೇಕು ಎಂದು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ನವೆಂಬರ್ 1ಕ್ಕೇ ಮೊದಲ ಪಟ್ಟಿ
ನವೆಂಬರ್ 1ರಂದು ಜೆಡಿಎಸ್ ಪಟ್ಟಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಚಾರದಲ್ಲಿ ಮಾತನಾಡಿದ ಹೆಚ್ ಡಿಕೆ, ನಾವು ಎಲ್ಲರಿಗಿಂತ ಮೊದಲೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿದ್ದೇವೆ. ಬೇರೆ ಪಕ್ಷಗಳಲ್ಲಿ ಅನೇಕ ಪಟ್ಟಿಗಳಿವೆ. ಅವುಗಳ ಪಾಲಿಗೆ ಪಟ್ಟಿಗಳೇ ಫಜೀತಿ ಆಗಲಿವೆ. ಈಗಾಗಲೇ 123 ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನ ಫೈನಲ್ ಮಾಡಿದ್ದು, ಅವರಿಗೆಲ್ಲ ಕೆಲಸ ಪ್ರಾರಂಭ ಮಾಡಲು ಹೇಳಿದ್ದೇನೆ. ನಾವು ಯಾವುದೇ ಪ್ರಚಾರ ಮಾಡದೇ ಕೆಲಸ ಪ್ರಾರಂಭ ಮಾಡಿದ್ದೇವೆ ಎಂದರು.

ಬೇರೆ ಪಕ್ಷಗಳು ಬೇರೆ ಬೇರೆ ರಾಜ್ಯದಿಂದ‌ ನಾಯಕರನ್ನು ಕರೆದುಕೊಂಡು ಬಂದು ಕಾರ್ಯತಂತ್ರ ಮಾಡುತ್ತಿದ್ದಾರೆ. ನಾವು ಕೂಡ 3-4 ತಂಡದಲ್ಲಿ ಕಾರ್ಯತಂತ್ರ ಮಾಡ್ತಿದ್ದೇವೆ. ಚುನಾವಣೆಗಾಗಿಯೇ ವಾರ್ ರೂಂ ಕೂಡಾ ತೆರೆಯಲು ಉದ್ದೇಶಿಸಲಾಗಿದೆ. ನಾವು ಎಲ್ಲಾ‌ ಪಕ್ಷಗಳಂತೆ ಸ್ಟ್ರಾಟರ್ಜಿ ಮಾಡುತ್ತಿದ್ದೇವೆ ಎಂದು ಹೇಳಿದರು.

ಜಾಹೀರಾತು ಮತ್ತು ಸುದ್ದಿ ಕಳುಹಿಸಲು ಸಂಪರ್ಕಿಸಿ
9740160669
ಭಾರತ ಸಾರಥಿ ಕನ್ನಡ ದಿನಪತ್ರಿಕೆ ಸದಾ ನಿಮ್ಮೊಂದಿಗೆ

Share. Facebook Twitter Pinterest LinkedIn Telegram Email
Previous ArticleE paper 30 oct 2022
Next Article ನೀರಾ ಆರ್ಯ ಚಿತ್ರದ ಮೂಲಕ ಬಾಲಿವುಡ್ ಗೆ ಕಾಲಿಡುತ್ತಿರುವ ನಿರ್ದೇಶಕಿ ರೂಪ ಅಯ್ಯರ್

Related Posts

ನೀವು ಮ್ಯೂಚುವಲ್ ಫಂಡ್‌ಗಳಲ್ಲಿ ಹೂಡಿಕೆ ಮಾಡುವಾಗ ಆಸ್ತಿ ಹಂಚಿಕೆ ಏಕೆ ಬಹಳ ಮುಖ್ಯ -ರಿನಾ ನಥಾನಿ, ಮುಖ್ಯ ವ್ಯವಹಾರ ಅಧಿಕಾರಿ, ಕ್ವಾಂಟಮ್ ಎಎಂಸಿ.

October 20, 2022

ಆರ್ಕಿಡ್ಸ್ ಅಂತಾರಾಷ್ಟ್ರೀಯ ಶಾಲೆಯಲ್ಲಿ ಪುಸ್ತಕ ಮುಕ್ತ ದಿನ

October 1, 2022

ಸಿಇಟಿ ಸೀಟು ಹಂಚಿಕೆ; ಇನ್ನೊಂದು ವಾರದಲ್ಲಿ ಸೀಟ್ ಮ್ಯಾಟ್ರಿಕ್ಸ್, ಶುಲ್ಕ ನಿಗದಿಗೆ ಕ್ರಮ

August 18, 2022
Ad 2
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

Recent Posts

ಇಂಜಿನಿಯರಿಂಗ್ ಪದವಿ ಪಡೆದಿರುವ ಶ್ರುತಿ ನಟನೆಯಲ್ಲಿ ಬ್ಯುಸಿ

August 16, 2022

ನಾನು ಮಾಡೆಲ್ ಆಗಿದ್ದೇನೆ ಎಂದರೆ ಅದಕ್ಕೆ ಪ್ರೇರಣೆ ಕಿಚ್ಚ ಸುದೀಪ್ – ವಿನಯಾ ಗಣೇಶ್

November 18, 2022

ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಪುಟ್ಟಕ್ಕನ ಮಗಳು

August 15, 2022

ಯಶಸ್ವಿ 200 ಸಂಚಿಕೆ ಪೂರೈಸಿದ ಮುದ್ದುಮಣಿಗಳು… ಶಿವು ಪಾತ್ರಧಾರಿ ಹೇಳಿದ್ದೇನು ಗೊತ್ತಾ?

September 19, 2022
About Us
About Us
Facebook Twitter YouTube
February 2023
M T W T F S S
 12345
6789101112
13141516171819
20212223242526
2728  
« Jan    
Latest Posts

E paper 01 Feb 2023

E paper 29 jan 2023

E paper 27 jan 2023

© 2023 Bharatha Sarathi. Powered by FILMY SCOOP.

Type above and press Enter to search. Press Esc to cancel.