Bharatha SarathiBharatha Sarathi
  • HOME
  • About Us
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಕ್ರೀಡೆ
  • ಕ್ರೈಂ ಸುದ್ದಿ
  • ರಾಜಕೀಯ
  • ರಾಜ್ಯ ಸುದ್ದಿ
  • More
    • ತಂತ್ರಜ್ಞಾನ
    • ರಾಶಿ ಭವಿಷ್ಯ
    • ರಾಷ್ಟ್ರೀಯ ಸುದ್ದಿ
    • ಲೋಕಲ್ ಸುದ್ದಿ
    • ವಾಣಿಜ್ಯ
    • ವಿಶೇಷವರದಿ
    • ಸಿನಿಮಾ
  • ಇ-ಪೇಪರ್

Subscribe to Updates

Get the latest creative news from FooBar about art, design and business.

Facebook Twitter Instagram
Trending
  • E paper 01 oct 2023
  • E paper 30 sep 2023
  • E paper 29 sep 2023
  • E paper 27 sep 2023
  • E paper 26 sep 2023
  • E paper 22 sep 2023
  • E paper 22 sep 2023
  • E paper 21 sep 2023
Facebook Twitter Instagram
Bharatha SarathiBharatha Sarathi
AD 1
  • HOME
  • About Us
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಕ್ರೀಡೆ
  • ಕ್ರೈಂ ಸುದ್ದಿ
  • ರಾಜಕೀಯ
  • ರಾಜ್ಯ ಸುದ್ದಿ
  • More
    • ತಂತ್ರಜ್ಞಾನ
    • ರಾಶಿ ಭವಿಷ್ಯ
    • ರಾಷ್ಟ್ರೀಯ ಸುದ್ದಿ
    • ಲೋಕಲ್ ಸುದ್ದಿ
    • ವಾಣಿಜ್ಯ
    • ವಿಶೇಷವರದಿ
    • ಸಿನಿಮಾ
  • ಇ-ಪೇಪರ್
Bharatha SarathiBharatha Sarathi
Home»ಕ್ರೈಂ ಸುದ್ದಿ»ಹಾಡಹಗಲೇ ರೇಷ್ಮೆ ವ್ಯಾಪಾರಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ; ದಾಳಿಕೋರರಿಂದ ಪಾರಾದ ಫೈರೋಜ್
ಕ್ರೈಂ ಸುದ್ದಿ

ಹಾಡಹಗಲೇ ರೇಷ್ಮೆ ವ್ಯಾಪಾರಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ; ದಾಳಿಕೋರರಿಂದ ಪಾರಾದ ಫೈರೋಜ್

August 2, 2022
Facebook Twitter Pinterest LinkedIn WhatsApp Reddit Email Telegram
Share
Facebook Twitter LinkedIn Pinterest Email Telegram WhatsApp

ಹಾಡಹಗಲೇ ರೇಷ್ಮೆ (Silk) ವ್ಯಾಪಾರಿ ಫೈರೋಜ್​ ಎಂಬುವವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲು ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆ ಶಿಡ್ಲಘಟ್ಟದಲ್ಲಿ ನಡೆದಿದೆ. ಸ್ಟಾರ್​ಸಿಟಿ ಬೈಕ್​ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳಿಂದ ಕೃತ್ಯ ನಡೆದಿದೆ. ಅದೃಷ್ಟವಶಾತ್​ ಫೈರೋಜ್ ದಾಳಿಕೋರರಿಂದ ತಪ್ಪಿಸಿಕೊಂಡಿದ್ದಾರೆ. ಫೈರೋಜ್​ನ ಎಡಗೈನ ಹೆಬ್ಬೆರಳು ಕತ್ತರಿಸಿದ್ದು, ಹೆಬ್ಬೆರಳು ಮರುಜೋಡಣೆಗಾಗಿ ಬೆಂಗಳೂರಿನ (Bengaluru) ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಹಿಂದೆ ಫೈರೋಜ್​ ಸ್ನೇಹಿತ ಅಮ್ಜದ್​ನ ಕೊಲೆಯಾಗಿತ್ತು. ಅಮ್ಜದ್​ ಕೊಂದಿದ್ದ ಖಲಂದರ್​​ ಕಡೆಯವರಿಂದಲೇ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ. ಶಿಡ್ಲಘಟ್ಟ ಟೌನ್​ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹುಬ್ಬಳ್ಳಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಹುಬ್ಬಳ್ಳಿ: ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ಹುಬ್ಬಳ್ಳಿಯ ಕುಸುಗಲ್ ರಸ್ತೆಯ ಶೆಲ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಉತ್ತರ ಪ್ರದೇಶ ಮೂಲದ ಕುಮಾರ್ ಎಂಬುವನ ಮೇಲೆ ಹಲ್ಲೆ ನಡೆದಿದೆ. ಗಂಭೀರವಾಗಿ ಗಾಯಗೊಂಡ ಕುಮಾರ್​ನನ್ನು​​ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೇಶ್ವಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ನಿರುದ್ಯೋಗಿಗಳನ್ನ ಬಳಸಿಕೊಂಡು ಡ್ರಗ್ಸ್​​ ಸರಬರಾಜು ಗ್ಯಾಂಗ್ ಬಂಧನ

ಬೆಂಗಳೂರು: ನಿರುದ್ಯೋಗಿಗಳನ್ನು ಬಳಸಿಕೊಂಡು ಡ್ರಗ್ಸ್​​ ಸರಬರಾಜು ಮಾಡುತ್ತಿದ್ದ ಐವರನ್ನು ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಿಶಾಲ್ ಕುಮಾರ್, ಭೀಮಾಂಶು ಠಾಕೂರ್, ಸಾಗರ್ ಮಹಾಬಲಿಸಿಂಗ್, ಸುಬರ್ಜಿತ್ ಸಿಂಗ್ ಬಂಧಿತ ಆರೋಪಿಗಳು. ಆರೋಪಗಳು Loconto ಮೂಲಕ ಉದ್ಯೋಗದ ಆಸೆ ತೋರಿಸುತ್ತಿದ್ದರು.

ಆರೋಪಿಗಳು ಯುವಕರಿಗೆ ಉದ್ಯೋಗದ ಆಸೆ ತೋರಿಸಿ ನೇಮಕ ಮಾಡಿಕೊಳ್ಳುತ್ತಿದ್ದರು. ನಂತರ ಅಂತಾರಾಷ್ಟ್ರೀಯ ಕೊರಿಯರ್ ಸರ್ವಿಸ್ ಮೂಲಕ‌ ಯುವಕರ ಬಳಿಗೆ ಡ್ರಗ್ಸ್ ಕಳುಹಿಸುತ್ತಿದ್ದರು.

ನಂತರ ಆರೋಪಿಗಳು ಇಂಟರ್ ನ್ಯಾಷನಲ್ ಕೊರಿಯರ್ ಸರ್ವೀಸ್ ಮೂಲಕ‌ ಅವರ ಬಳಿಗೆ ಡ್ರಗ್ಸ್ ಕಳುಹಿಸುತ್ತಿದ್ದರು. ವಿವಿಧ ನಗರಗಲ್ಲಿ ಸಾಮಾಜಿಕ ಜಾಲತಾಣದ ಮೂಲಕ ಗಿರಾಕಿಗಳನ್ನ ಸಂಪರ್ಕಿಸಿ ಪೋನ್ ಪೇ ಮೂಲಕ ಹಣ ಪಡೆದುಕೊಳ್ಳುತ್ತಾ ಇದ್ದರು.

ಹಣ ಪಡೆದ ಬಳಿಕ ಉದ್ಯೋಗದ ನೆಪದಲ್ಲಿ ಯುವಕರ ಮೂಲಕ ಡ್ರಗ್ಸ್  ಸಪ್ಲೈ ಮಾಡಿಸುತ್ತಾ ಇದ್ದರು. ಗಿಫ್ಟ್ ಬಾಕ್ಸ್, ಕೊರಿಯರ್ ಎನ್ ವಲಪ್ ಮುಖಾಂತರ ಡ್ರಗ್ಸ್ ಸರಬರಾಜು ಮಾಡಲಾಗುತ್ತಿತ್ತು. ಪೊಲೀಸರು ಆರೋಪಿಗಳಿಂದ ಎರಡು ಕೋಟಿ ಮೌಲ್ಯದ ವಿವಿಧ ರೀತಿಯ ಸಿಂಥೆಟಿಕ್ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಪೊಲೀಸ್​ರು ಐದು ಬ್ಯಾಂಕ್ ಖಾತೆಗಳನ್ನ ಫ್ರೀಜ್ ಮಾಡಿದ್ದಾರೆ.

ಅಸಿಸ್ಟೆಂಟ್ ರಿಜಿಸ್ಟ್ರಾರ್ ಮೇಲೆ KSOU ವಿಸಿಯಿಂದ ಹಲ್ಲೆ ಆರೋಪ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (KSOU) ಕುಲಪತಿ, ಅಸಿಸ್ಟೆಂಟ್ ರಿಜಿಸ್ಟ್ರಾರ್ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ತಡವಾಗಿ ಕಚೇರಿಗೆ ಬಂದಿದ್ದಕ್ಕೆ ಅಸಿಸ್ಟೆಂಟ್ ರಿಜಿಸ್ಟ್ರಾರ್ ಪ್ರದೀಪ್ ಗಿರಿ  ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಕೆಎಸ್​ಓಯು ಕುಲಪತಿ ವಿದ್ಯಾಶಂಕರ್, ಪಿಎಸ್‌ ದೇವರಾಜು ವಿರುದ್ಧ ಆರೋಪ ಕೇಳಿ ಬಂದಿದೆ.

ತಡವಾಗಿ ಕಚೇರಿಗೆ ಬಂದಿದ್ದಕ್ಕೆ ಅಸಿಸ್ಟೆಂಟ್ ರಿಜಿಸ್ಟ್ರಾರ್ ಜೊತೆ ಜಗಳ ಪ್ರಾರಂಭವಾಗಿದೆ. ಮಾತಿನ ಚಕಮಕಿ ನಂತರ ಕೊಠಡಿಗೆ ಕರೆದೊಯ್ದು ಹಲ್ಲೆಗೈದ ಆರೋಪ ಕೇಳಿ ಬಂದಿದೆ. ಪ್ರದೀಪ್ ಗಿರಿ ಅವರಿಗೆ ಮುಖ, ಕಿವಿಗೆ ಗಾಯವಾಗಿದ್ದು,  ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಯಲಕ್ಷ್ಮೀ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಸಿದ್ದರಾಮೋತ್ಸವಕ್ಕೆ ಆಗಮಿಸುತ್ತಿದ್ದ ಕ್ರೂಸರ್‌ ಪಲ್ಟಿ, ಓರ್ವ ಸಾವು

ಬಾಗಲಕೋಟೆ: ಸಿದ್ದರಾಮೋತ್ಸವಕ್ಕೆ ಆಗಮಿಸುತ್ತಿದ್ದ ಕ್ರೂಸರ್‌ ಪಲ್ಟಿಯಾಗಿ ಓರ್ವ ಸಾವನ್ನಪ್ಪಿರುವ ಘಟನೆ ಬಾದಾಮಿ ತಾಲೂಕಿನ  ಹೂಲಗೇರಿ ಸಮೀಪ ನಡೆದಿದೆ.  ಚಿಕ್ಕಆಲಗುಂಡಿ ಗ್ರಾಮದ ಪ್ರಕಾಶ್ ಕಂಬಾರ(35) ಮೃತ ದುರ್ದೈವಿ. ಕ್ರೂಸರ್‌ ವಾಹನದಲ್ಲಿದ್ದ ನಾಲ್ವರಿಗೆ ಗಾಯ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾಳೆ ದಾವಣಗೆರೆಯಲ್ಲಿ ನಡೆಯುವ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು. ಕೆರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ರಸ್ತೆ ದಾಟುತ್ತಿದ್ದ ವೇಳೆ ಲಾರಿ ಡಿಕ್ಕಿ ವೃದ್ಧೆ ಸಾವು

ತುಮಕೂರು: ರಸ್ತೆ ದಾಟುತ್ತಿದ್ದ ವೇಳೆ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ವೃದ್ಧೆ ಸಾವನ್ನಪ್ಪಿರುವ ಘಟನೆ ತುಮಕೂರಿನ ಕ್ಯಾತ್ಸಂದ್ರ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ತಾಲೂಕಿನ ಸಕ್ಕರೆಗೊಲ್ಲಹಳ್ಳಿಯ ಜಯಮ್ಮ(81) ಮೃತ ದುರ್ದೈವಿ. ಬೆಂಗಳೂರು ಕಡೆಯಿಂದ ಬರುತ್ತಿದ್ದ ಲಾರಿ ವೃದ್ಧೆಗೆ ಡಿಕ್ಕಿ ಹೊಡೆದಿದೆ. ತುಮಕೂರು ಪೂರ್ವ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share. Facebook Twitter Pinterest LinkedIn Telegram Email
Previous Articleಪಶುಸಂಗೋಪನೆ ಇಲಾಖೆ ಹೆಸರಿನಲ್ಲಿ ನಕಲಿ ನೇಮಕಾತಿ ಅಧಿಸೂಚನೆ ಹೊರಡಿಸಿದ ಕಿಡಿಗೇಡಿಗಳು
Next Article ರಕ್ತ ಚಂದನ ಸಾಗಾಟ ಮಾಡುತ್ತಿದ್ದ ಆರೋಪಿಗಳ ಬಂಧನ: 35 ಲಕ್ಷ ರೂ. ಮೌಲ್ಯದ ರಕ್ತ ಚಂದನ ವಶಕ್ಕೆ

Related Posts

ವ್ಹೀಲಿಂಗ್ ಶೋಕಿಗೆ ಬೈಕ್​​ಗಳನ್ನು ಕದಿಯುತ್ತಿದ್ದ ಯುವಕನ ಬಂಧನ

August 3, 2022

ತಮಿಳುನಾಡಲ್ಲಿ 12 ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ, ಎರಡು ವಾರಗಳಲ್ಲಿ ಇದು 5ನೇ ಪ್ರಕರಣ

August 3, 2022

ವೀಕೆಂಡ್ ಎಣ್ಣೆ ಪಾರ್ಟಿಗಾಗಿ ಸರಗಳ್ಳತನ ಮಾಡುತ್ತಿದ್ದ ಮೂವರು ಅರೆಸ್ಟ್, ಆರೋಪಿಗಳಿಂದ 5 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ

August 3, 2022
Ad 2
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

Recent Posts

ನಾನು ಮಾಡೆಲ್ ಆಗಿದ್ದೇನೆ ಎಂದರೆ ಅದಕ್ಕೆ ಪ್ರೇರಣೆ ಕಿಚ್ಚ ಸುದೀಪ್ – ವಿನಯಾ ಗಣೇಶ್

November 18, 2022

ಇಂಜಿನಿಯರಿಂಗ್ ಪದವಿ ಪಡೆದಿರುವ ಶ್ರುತಿ ನಟನೆಯಲ್ಲಿ ಬ್ಯುಸಿ

August 16, 2022

ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಪುಟ್ಟಕ್ಕನ ಮಗಳು

August 15, 2022

ಯಶಸ್ವಿ 200 ಸಂಚಿಕೆ ಪೂರೈಸಿದ ಮುದ್ದುಮಣಿಗಳು… ಶಿವು ಪಾತ್ರಧಾರಿ ಹೇಳಿದ್ದೇನು ಗೊತ್ತಾ?

September 19, 2022
About Us
About Us
Facebook Twitter YouTube
October 2023
M T W T F S S
 1
2345678
9101112131415
16171819202122
23242526272829
3031  
« Sep    
Latest Posts

E paper 01 oct 2023

E paper 30 sep 2023

E paper 29 sep 2023

© 2023 Bharatha Sarathi. Powered by FILMY SCOOP.

Type above and press Enter to search. Press Esc to cancel.