Bharatha SarathiBharatha Sarathi
  • HOME
  • About Us
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಕ್ರೀಡೆ
  • ಕ್ರೈಂ ಸುದ್ದಿ
  • ರಾಜಕೀಯ
  • ರಾಜ್ಯ ಸುದ್ದಿ
  • More
    • ತಂತ್ರಜ್ಞಾನ
    • ರಾಶಿ ಭವಿಷ್ಯ
    • ರಾಷ್ಟ್ರೀಯ ಸುದ್ದಿ
    • ಲೋಕಲ್ ಸುದ್ದಿ
    • ವಾಣಿಜ್ಯ
    • ವಿಶೇಷವರದಿ
    • ಸಿನಿಮಾ
  • ಇ-ಪೇಪರ್

Subscribe to Updates

Get the latest creative news from FooBar about art, design and business.

Facebook Twitter Instagram
Trending
  • E paper 29 jan 2023
  • E paper 27 jan 2023
  • 26 jan 2023
  • E paper 25 jan 2023
  • E paper 24 jan 2023
  • E paper 22 jan 2023
  • E paper 21 jan 2023
  • E paper 20 jan 2023
Facebook Twitter Instagram
Bharatha SarathiBharatha Sarathi
AD 1
  • HOME
  • About Us
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಕ್ರೀಡೆ
  • ಕ್ರೈಂ ಸುದ್ದಿ
  • ರಾಜಕೀಯ
  • ರಾಜ್ಯ ಸುದ್ದಿ
  • More
    • ತಂತ್ರಜ್ಞಾನ
    • ರಾಶಿ ಭವಿಷ್ಯ
    • ರಾಷ್ಟ್ರೀಯ ಸುದ್ದಿ
    • ಲೋಕಲ್ ಸುದ್ದಿ
    • ವಾಣಿಜ್ಯ
    • ವಿಶೇಷವರದಿ
    • ಸಿನಿಮಾ
  • ಇ-ಪೇಪರ್
Bharatha SarathiBharatha Sarathi
Home»ರಾಜಕೀಯ»ಯೋಗಿ ಮಾದರಿಯೇ ಬೇರೆ, ನಮ್ಮಲ್ಲಿನ ಪರಿಸ್ಥಿತಿಯೇ ಬೇರೆ: ಗೃಹಸಚಿವ ಆರಗ ಜ್ಞಾನೇಂದ್ರ‌
ರಾಜಕೀಯ

ಯೋಗಿ ಮಾದರಿಯೇ ಬೇರೆ, ನಮ್ಮಲ್ಲಿನ ಪರಿಸ್ಥಿತಿಯೇ ಬೇರೆ: ಗೃಹಸಚಿವ ಆರಗ ಜ್ಞಾನೇಂದ್ರ‌

August 3, 2022
Facebook Twitter Pinterest LinkedIn WhatsApp Reddit Email Telegram
Share
Facebook Twitter LinkedIn Pinterest Email Telegram WhatsApp

ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ಸ್ವಪಕ್ಷದ ಕಾರ್ಯಕರ್ತರೇ ಬುಗಿಲೆದ್ದಿದ್ದು, ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸುವಂತಾಗಿದೆ. ಕರಾವಳಿಯಲ್ಲಿ ಆರಂಭವಾದ ಪ್ರತಿಭಟನೆ ಇದೀಗ ಇಡೀ ರಾಜ್ಯಾದ್ಯಂತ ವ್ಯಾಪಿಸಿದ್ದು, ಗೃಹಸಚಿವರ ಸರ್ಕಾರಿ ನಿವಾಸಕ್ಕೆ ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ಈ ಬಗ್ಗೆ ಜಿಲ್ಲೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಗೃಹಸಚಿವ ಆರಗ ಜ್ಞಾನೇಂದ್ರ‌ (Araga Jnanendra), ಎಬಿವಿಪಿ ಕಾರ್ಯಕರ್ತರು ಪಿಎಫ್​ಐ, ಎಸ್​ಡಿಪಿಐ ಸೇರಿದಂತೆ ಮತೀಯ ಸಂಘಟನೆಗಳನ್ನು ನಿಷೇಧಿಸುವಂತೆ ಹೋರಾಟ ಮಾಡಿದ್ದಾರೆ ಎಂದರು.

ಸೈದಾಂತಿಕಾವಾಗಿ ನಾವೆಲ್ಲ ಒಂದಾಗಿಯೇ ಇದ್ದೇವೆ. ಇಂದು ನಮ್ಮ ಮನೆ ಬಳಿ ಬಂದು ಎಬಿವಿಪಿಯವರು ಪ್ರತಿಭಟನೆ ನಡೆಸಿದ್ದಾರೆ. ಪಿಎಫ್​ಐ, ಎಸ್​ಡಿಪಿಐ ಸೇರಿದಂತೆ ಮತೀಯ ಸಂಘಟನೆಗಳನ್ನು ನಿಷೇಧಿಸುವಂತೆ ಹೋರಾಟ ಮಾಡಿದ್ದಾರೆ. ನಮ್ಮಲ್ಲಿ ಬಾಡಿಗೆ ಹಣಕ್ಕೆ ಇರುವಂತಹ ಕಾರ್ಯಕರ್ತರಿಲ್ಲ‌. ಒಬ್ಬ ಕಾರ್ಯಕರ್ತರಾಗಿ ಬೆಳೆಯಲು ಸಾಕಷ್ಟು ವರ್ಷ ಬೇಕು. ಬಡವನಾದರೂ ಆತ ಪಕ್ಷಕ್ಕೆ ಹಾಗೂ ಸಂಘಟನೆಗೆ ಒತ್ತು‌ನೀಡುತ್ತಾನೆ. ಇಂಥ ಕಾರ್ಯಕರ್ತನನ್ನು ಕಳೆದುಕೊಂಡಾಗ ಆಕ್ರೋಶ ವ್ಯಕ್ತವಾಗುವುದು ಸಹಜ ಎಂದರು.

ಹರ್ಷ ಹತ್ಯೆ ಪ್ರಕರಣದಲ್ಲಿ ಆರೋಪಿಗಳು ಆರಾಮಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಹೀಗಾಗಿ ಕಾರಾಗೃಹದ ಮೇಲೆ‌ ದಾಳಿ ನಡೆಸಿ 15 ಜನರನ್ನು ಸಸ್ಪೆಂಡ್ ಮಾಡಿದ್ದೇವೆ. ಅಧಿಕಾರಿಗಳನ್ನು ಬೇರೆ ಕಡೆಗೆ ವರ್ಗಾವಣೆ ಮಾಡಿದ್ದೇವೆ. ಕಾಂಗ್ರೆಸ್ ಮಾಡಿಟ್ಟಿರುವ ಅಸಹ್ಯವನ್ನು ತೊಳೆಯಲು ಸಮಯ ಹಿಡಿಯುತ್ತಿದೆ ಎಂದರು.

ಸರಣಿ ಕೊಲೆಗಳು ನಡೆದ ಮಂಗಳೂರು ಸ್ಥಿತಿಗತಿಗಳ ಬಗ್ಗೆ ಮಾತನಾಡಿದ ಗೃಹಸಚಿವರು, ಮಂಗಳೂರು ಇದೀಗ ಸಹಜ ಸ್ಥಿತಿಗೆ ಬಂದಿದೆ. ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳುತ್ತೇವೆ. ಶಾಂತಿ ಸಭೆ ನಡೆಯುತ್ತಿದೆ. ಪೊಲೀಸರು ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ.  ಎನ್​ಕೌಂಟರ್​ಗಳು ಹಾಗೂ ಸಾವಿಗೆ ಇನ್ನೊಂದು ಸಾವು ಪರಿಹಾರವಲ್ಲ. ಘಟನೆ ನಡೆಸಿದಾಗ ಈ ರೀತಿ ಹೇಳುವುದು ಸಹಜ. ಪ್ರಾಣ ತೆಗೆಯುವುದು, ರಕ್ತ ಹರಿಸುವುದು ಹುಡುಗಾಟದ ಮಾತಲ್ಲ. ಇವೆಲ್ಲವೂ ನಿಲ್ಲಬೇಕು. ಈ ನಿಟ್ಟಿನಲ್ಲಿ ಫಾಸ್ಟ್ ಟ್ರಾಕ್‌ಕೋರ್ಟ್​ಗೆ ಮನವಿ ಮಾಡುತ್ತಿದ್ದೇವೆ. ಬಿಸಿ‌ ಇದ್ದಾಗಲೇ ತಟ್ಟಿದರೆ ಮುಂದೆ ಈ ಕೃತ್ಯ ನಡೆಸುವವರಿಗೆ ಎಚ್ಚರಿಕೆ ಗಂಟೆಯಾದಂತಾಗುತ್ತದೆ ಎಂದರು.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ತಕ್ಷಣ ಮತಾಂದ ಶಕ್ತಿಗಳ ಮೇಲಿದ್ದ 2000 ಪ್ರಕರಣಗಳನ್ನು ಹಿಂಪಡೆದರು. ಟಿಪ್ಪು ಜಯಂತಿ ಆರಂಭಿಸುವ ಮೂಲಕ ರಕ್ತಪಾತ ಮಾಡಿಸಿದರು. ಇವರು ಮತ ಬ್ಯಾಂಕ್​ಗಾಗಿ ಯಾರ್ಯಾರನ್ನೋ ಬೆಳೆಸಿದ್ದಾರೆ. ನಮ್ಮ ಮನೆ ಎದುರು ಪ್ರತಿಭಟನೆ ನಡೆಸಿದರು ಎಂದಾಕ್ಷಾಣ ಅವರು ಕಾಂಗ್ರೆಸ್ ಜೊತೆಗೆ ಹೋಗುತ್ತಾರೆ ಎಂದಲ್ಲ. ಸಿದ್ದರಾಮಯ್ಯ ಸರ್ಕಾರವಿದ್ದಾಗ ದುಷ್ಕೃತ್ಯ ನಡೆದರೆ ಪ್ರಕರಣವನ್ನೇ ದಾಖಲಿಸುತ್ತಿರಲಿಲ್ಲ ಎಂದರು.

ಯೋಗಿ ಮಾದರಿಯೇ ಬೇರೆ, ನಮ್ಮ ಪರಿಸ್ಥಿತಿಯೇ ಬೇರೆ

ಬೆಂಗಳೂರಿನ ನನ್ನ ನಿವಾಸಕ್ಕೆ ಎಬಿವಿಪಿ ಕಾರ್ಯಕರ್ತರು ಎಂದು ಹೇಳಿಕೊಂಡ ಕೆಲವರು ಪ್ರತಿಭಟನೆ ಮಾಡಿದ್ದಾರೆ. ಆ ಬಗ್ಗೆ ಗಮನ ಹರಿಸುವಂತೆ ನಾನು ಪೊಲೀಸರರಿಗೆ ಹೇಳಿದ್ದೇನೆ. ಅವರು ಎಬಿವಿಪಿ ಕಾರ್ಯಕರ್ತರೇ ಆಗಿದ್ದರೆ ನಾನು ಅವರಿಗೆ ಮನವಿ ಮಾಡಿಕೊಳ್ಳುತ್ತೇನೆ. ಸರ್ಕಾರ ನಿಮ್ಮ ಭಾವನೆಯನ್ನು ಅರ್ಥ ಮಾಡಿಕೊಳ್ಳುತ್ತದೆ ಎಂದು ಗೃಹಸಚಿವರು ಹೇಳಿದ್ದಾರೆ. ನಾವು ಸಾಕಷ್ಟು ಪ್ರಕರಣಗಳಲ್ಲಿ ತಪ್ಪಿತಸ್ಥರ ವಿರುದ್ಧ ಎಫ್​ಐಆರ್ ದಾಖಲಿಸಿದ್ದೇವೆ. ಯೋಗಿ ಮಾದರಿಯಲ್ಲಿ ಕ್ರಮ ಕೈಗೊಳ್ಳುವಂತೆ ಒತ್ತಾಯಗಳು ಕೇಳಿಬರುತ್ತಿವೆ. ಆದರೆ ಯೋಗಿ ಮಾದರಿಯೇ ಬೇರೆ ನಮ್ಮ ಪರಿಸ್ಥಿತಿಯೇ ಬೇರೆಯಾಗಿದೆ. ನಮಗೆ ನಮ್ಮದೇ ಆದ ಕಾರಣ ಇದೆ ಎಂದರು.

ಗೃಹ ಇಲಾಖೆಯ ವೈಫಲ್ಯವನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟೀಕಿಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಗೃಹಸಚಿವರು, ಸಿದ್ದರಾಮಯ್ಯ ಅವರ ಯಾವುದೇ ಸರ್ಟಿಫಿಕೇಟ್ ಬೇಡ. ಅವರ ಕಾಲದಲ್ಲಿ ಪೊಲೀಸರೇ ಧರಣಿ ನಡೆಸಿದ್ದರು. ನಾನು ಅವರ ಹಿರಿತನವನ್ನು ಗೌರವಿಸುತ್ತೇನೆ. ಅವರ ಕಾಲದಲ್ಲಿ ಪೊಲೀಸ್ ಇಲಾಖೆ ಕೆಂಪಯ್ಯ ಕೈಯಲ್ಲಿತ್ತು. ಆಗ ಒಟ್ಟು ಒಟ್ಟು 32 ಕೊಲೆಗಳಾಗಿತ್ತು. ನಾನು ಸಮರ್ಥವಾಗಿ ಇಲಾಖೆಯನ್ನು ನಿಭಾಯಿಸಿದ್ದೇನೆ. ಸಚಿವನಾದ ಬಳಿಕ ಪ್ರತಿ ಪ್ರಕರಣವನ್ನೂ ಗಂಭೀರವಾಗಿ ಪರಿಗಣಿಸಿದ್ದೇನೆ ಎಂದರು.

ಎಬಿವಿಪಿ ಸದಸ್ಯರನ್ನು ನಾನೇ ಆಹ್ವಾನಿಸುತ್ತೇನೆ

ಗೃಹ ಸಚಿವರ ಸರ್ಕಾರಿ ಮನೆ ಬಳಿ ಎಬಿವಿಪಿ ಪ್ರತಿಭಟನೆ ನಡೆಸಿದ ಬಗ್ಗೆ ಮಾಧ್ಯಮ ಪಕಟಣೆ ಹೊರಡಿಸಿದ್ದು, ನಾನು ಅವರ ಭಾವನೆಗಳನ್ನು ಅರ್ಥ ಮಾಡಿಕೊಂಡಿದ್ದೇನೆ. ಎಬಿವಿಪಿ ಸದಸ್ಯರನ್ನು ನಾನೇ ಆಹ್ವಾನಿಸಿ ಮಾತನಾಡುತ್ತೇನೆ ಎಂದು ಹೇಳಿದ್ದಾರೆ. ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಗಳಿಂದ ಹಿಡಿದು ಇತ್ತೀಚಿಗಿನ ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆಯಂತಹ ಘಟನೆಗಳ ಹಿನ್ನಲೆಯಲ್ಲಿ ಎಸ್​ಡಿಪಿಐಯಂತಹ ಸಂಘಟನೆಗಳ ಮೇಲೆ ನಿಷೇಧ ಹೇರಬೇಕು ಎಂಬ ಬೇಡಿಕೆಯೊಂದಿಗೆ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಮನೆಯಲ್ಲಿ ನನ್ನನ್ನು ಭೇಟಿಯಾಗಲು ಬಂದಿದ್ದ ಎಬಿವಿಪಿ ಕಾರ್ಯಕರ್ತರು ನನ್ನ ಅನುಪಸ್ಥಿತಿಯಲ್ಲಿ ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ. ಎಬಿವಿಪಿಯ ಸದಸ್ಯರನ್ನು ನಾನೇ ಆಹ್ವಾನಿಸಿ ಮಾತನಾಡುತ್ತೇನೆ ಎಂದರು.

Share. Facebook Twitter Pinterest LinkedIn Telegram Email
Previous Articleನರೇಂದ್ರ ಮೋದಿಯೇ 2024ರ ಪ್ರಧಾನಿ ಅಭ್ಯರ್ಥಿ: ಅಮಿತ್ ಶಾ ಘೋಷಣೆ
Next Article ಸಿದ್ದರಾಮೋತ್ಸವ ಮುಗಿಯುವವರೆಗೂ ಪಾದಯಾತ್ರೆ ಮಾಡಬಾರದು; ಡಿಕೆಶಿ ಬೆಂಬಲಿಗರಿಗೆ ಸಿದ್ದರಾಮಯ್ಯ ಬೆಂಬಲಿಗರಿಂದ ತಾಕೀತು

Related Posts

ಸಿದ್ದರಾಮೋತ್ಸವ ಮುಗಿಯುವವರೆಗೂ ಪಾದಯಾತ್ರೆ ಮಾಡಬಾರದು; ಡಿಕೆಶಿ ಬೆಂಬಲಿಗರಿಗೆ ಸಿದ್ದರಾಮಯ್ಯ ಬೆಂಬಲಿಗರಿಂದ ತಾಕೀತು

August 3, 2022

ನರೇಂದ್ರ ಮೋದಿಯೇ 2024ರ ಪ್ರಧಾನಿ ಅಭ್ಯರ್ಥಿ: ಅಮಿತ್ ಶಾ ಘೋಷಣೆ

August 3, 2022

ಸರ್ಕಾರ ಮಕ್ಕಳಿಗೆ ಮೊಟ್ಟೆ ಕೊಡಲೇಬೇಕು ಎಂದಾದರೆ ಮನೆಮನೆಗಳಿಗೆ ವಿತರಿಸಲಿ: ತೇಜಸ್ವಿನಿ ಅನಂತ್ ಕುಮಾರ್

August 2, 2022
Ad 2
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

Recent Posts

ಇಂಜಿನಿಯರಿಂಗ್ ಪದವಿ ಪಡೆದಿರುವ ಶ್ರುತಿ ನಟನೆಯಲ್ಲಿ ಬ್ಯುಸಿ

August 16, 2022

ನಾನು ಮಾಡೆಲ್ ಆಗಿದ್ದೇನೆ ಎಂದರೆ ಅದಕ್ಕೆ ಪ್ರೇರಣೆ ಕಿಚ್ಚ ಸುದೀಪ್ – ವಿನಯಾ ಗಣೇಶ್

November 18, 2022

ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಪುಟ್ಟಕ್ಕನ ಮಗಳು

August 15, 2022

ಯಶಸ್ವಿ 200 ಸಂಚಿಕೆ ಪೂರೈಸಿದ ಮುದ್ದುಮಣಿಗಳು… ಶಿವು ಪಾತ್ರಧಾರಿ ಹೇಳಿದ್ದೇನು ಗೊತ್ತಾ?

September 19, 2022
About Us
About Us
Facebook Twitter YouTube
January 2023
M T W T F S S
 1
2345678
9101112131415
16171819202122
23242526272829
3031  
« Dec    
Latest Posts

E paper 29 jan 2023

E paper 27 jan 2023

26 jan 2023

© 2023 Bharatha Sarathi. Powered by FILMY SCOOP.

Type above and press Enter to search. Press Esc to cancel.